ತರಬೇತಿ ವೇಳೆ ಕಾನ್ಸ್ ಟೇಬಲ್ ಸಾವು | ಅಧಿಕಾರಿಗಳ ವಿರುದ್ಧ ಟೈನಿ ಕಾನ್ಸ್ ಟೇಬಲ್ ಪ್ರತಿಭಟನೆ - Mahanayaka

ತರಬೇತಿ ವೇಳೆ ಕಾನ್ಸ್ ಟೇಬಲ್ ಸಾವು | ಅಧಿಕಾರಿಗಳ ವಿರುದ್ಧ ಟೈನಿ ಕಾನ್ಸ್ ಟೇಬಲ್ ಪ್ರತಿಭಟನೆ

yallappa
12/08/2021

ರಾಮನಗರ: ಚನ್ನಪಟ್ಟಣದ ಪೊಲೀಸ್ ತರಬೇತಿ ಶಾಲೆಯಲ್ಲಿ ತರಬೇತಿ ಪಡೆಯುತ್ತಿದ್ದ ವೇಳೆ ಕಾನ್ಸ್ಟೇಬಲ್ ವೋರ್ವರು ಕುಸಿದು ಬಿದ್ದು ಸಾವನ್ನಪ್ಪಿದ್ದ ಘಟನೆ ಗುರುವಾರ ನಡೆದಿದ್ದು, ಸ್ಥಳದಲ್ಲಿದ್ದ ಅಧಿಕಾರಿಗಳು ಸೂಕ್ತ ಸಮಯದಲ್ಲಿ ಚಿಕಿತ್ಸೆ ಕೊಡಿಸದೇ ನಿರ್ಲಕ್ಷ್ಯ ವಹಿಸಿದ್ದರಿಂದ ಸಾವು ಸಂಭವಿಸಿದೆ ಎನ್ನುವ ಆರೋಪಗಳು ಕೂಡ ಕೇಳಿ ಬಂದಿವೆ.


Provided by

ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನ ಯಲ್ಲಪ್ಪ ಮೃತಪಟ್ಟವರಾಗಿದ್ದಾರೆ. ಇವರು ಕಳೆದ ತಿಂಗಳಿಂದ ಪೊಲೀಸ್ ತರಬೇತಿ ಶಾಲೆಯಲ್ಲಿ ತರಬೇತಿ ಪಡೆಯುತ್ತಿದ್ದರು. ಗುರುವಾರ ತರಬೇತಿ ಸಂದರ್ಭ ಆಯಾಸದಿಂದ ಕುಸಿದು ಬಿದ್ದಿದ್ದರು  ಎಂದು ಹೇಳಲಾಗಿದೆ.

ಘಟನೆ ನಡೆದ ತಕ್ಷಣವೇ ಅವರಿಗೆ ಚಿಕಿತ್ಸೆ ಕೊಡಿಸಿದ್ದರೆ,  ಅವರನ್ನು ಬದುಕಿಸಬಹುದಿತ್ತು.  ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ  ಅವರಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ಕೊಡಿಸಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಸಾವು ಸಂಭವಿಸಿದೆ ಎಂದು ಆರೋಪಿಸಿ ಉಳಿದ ಟೈನಿ ಕಾನ್ಸ್ ಸ್ಟೇಬಲ್ ಗಳು ಪ್ರತಿಭಟನೆ ನಡೆಸಿದ್ದಾರೆ.

ಇನ್ನಷ್ಟು ಸುದ್ದಿಗಳು…

ಒಂದು ಬಾರಿ ಅವನು ನನ್ನ ಜೊತೆಗೆ ಲಿಮಿಟ್ ಮೀರಿ ವರ್ತಿಸಿದ್ದ: ಕಹಿ ನೆನಪು ಹಂಚಿಕೊಂಡ ಶಮಿತಾ ಶೆಟ್ಟಿ

ಬಿಜೆಪಿ ಸರ್ಕಾರದ ವಿರುದ್ಧವೇ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಪ್ರತಿಭಟನೆ | ಕಾರಣ ಏನು ಗೊತ್ತಾ?

ಪೊಲೀಸರ ನಡುವೆಯೇ ಘರ್ಷಣೆ: ಹೆಡ್ ಕಾನ್ಸ್ ಟೇಬಲ್ ಗೆ ಗುಂಡು ಹಾರಿಸಿ ಹತ್ಯೆ ಮಾಡಿದ ಕಾನ್ಸ್ ಟೇಬಲ್

ತಾಯಾಣೆ ನಾನು ಅಷ್ಟೊಂದು ಹಣವನ್ನು ಎಂದಿಗೂ ನೋಡೇ ಇಲ್ಲ | ಬಿಗ್ ಬಾಸ್ ವಿನ್ನರ್ ಮಂಜು ಪಾವಗಡ

ಮಾತುಬಾರದ, ಕಿವಿ ಕೇಳದ ಮಹಿಳೆಯ ಮೇಲೆ ಆಸ್ಪತ್ರೆಯಲ್ಲೇ ಅತ್ಯಾಚಾರ!

ಇತ್ತೀಚಿನ ಸುದ್ದಿ