ತುಲುನಾಡ್ ಮನ್ಸ ಸಮಾಜ ಸೇವಾ ಸಂಘದಿಂದ ಸಂವಿಧಾನ ದಿನಾಚರಣೆ - Mahanayaka

ತುಲುನಾಡ್ ಮನ್ಸ ಸಮಾಜ ಸೇವಾ ಸಂಘದಿಂದ ಸಂವಿಧಾನ ದಿನಾಚರಣೆ

mansa sangha
27/01/2022

ಮಂಗಳೂರು: ತುಲುನಾಡ್ ಮನ್ಸ ಸಮಾಜ ಸೇವಾ ಸಂಘ ( ರಿ ) ಕೇಂದ್ರ ಸಮಿತಿಯು ಸಂವಿಧಾನ ದಿನಾಚರಣೆಯನ್ನು ಆಚರಿಸಿತು.

ದುರ್ಗಾ ಪರಮೇಶ್ವರಿ ದೇವಾಳ ಪದವಿ ಪೂರ್ವ ಕಾಲೇಜು, ಪ್ರೌಢ ಶಾಲಾ ವಿಭಾಗದ ಉಪ ಪ್ರಾಂಶುಪಾಲರಾದ ಸೋಮಪ್ಪ ಆಲಂಗಾರ್, ಕಾರ್ಯಕ್ರಮದ ವೇದಿಕೆಯಲ್ಲಿ ಪರಮಪೂಜ್ಯ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಹಾರಾರ್ಪಣೆಗೈದು, ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, “ಭಾರತದ ಪ್ರಜೆಗಳಾದ ನಾವು ಸಂವಿಧಾನ ದಿನಾಚರಣೆಯನ್ನು ಆಚರಿಸುವುದು ಅಭಿಮಾನದ ಕೆಲಸವಾಗಬಾರದು, ಬದಲಾಗಿ ಅನುಯಾಯಿಗಳ ಕರ್ತವ್ಯ ಆಗಬೇಕು ಎಂದರು.

ಪರಮಪೂಜ್ಯ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಅಧ್ಯಕ್ಷತೆಯಲ್ಲಿ ರಚಿತವಾದ “ಭಾರತದ ಸಂವಿಧಾನ”ದ ರೂಪುರೇಷೆ, ಮೌಲ್ಯ, ಸಿದ್ಧಾಂತ ಮತ್ತು ಉದ್ದೇಶಗಳ ವಿಶೇಷ ವಿಶ್ಲೇಷಣೆಯನ್ನು ಸಮಗ್ರವಾಗಿ ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಚ್ಯುತ ಸಂಪಾಯಿರವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಎಮ್. ಶಾಂತರಾಮ್ ಮೂಡುಬಿದಿರೆ, ದಾಸಪ್ಪ ಎಡಪದವು, ಶಕುಂತಲಾ ದಾಸಪ್ಪ, ಗೋಪಾಲ ಮುತ್ತೂರು, ಸತೀಶ್ ಕಕ್ಕೆಪದವು, ಎಂ.ರಮೇಶ್ ಬೋಧಿ ಮೊದಲಾದವರು ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಅನ್ಯಜಾತಿ ಹುಡುಗಿಯೊಂದಿಗೆ ಮದುವೆ: ಲೈಟ್ ಕಂಬಕ್ಕೆ ಕಟ್ಟಿ ಹುಡುಗನ ತಾಯಿ ಮೇಲೆ ಹಲ್ಲೆ

ಭೀಮ್ ಸೇನೆ ದಕ್ಷಿಣ ಕನ್ನಡ ವತಿಯಿಂದ ಸಂವಿಧಾನ ದಿನಾಚರಣೆ

ಸಂವಿಧಾನ ದಿನವೇ ಅಂಬೇಡ್ಕರ್ ಗೆ ಅವಮಾನ ಮಾಡಿದ ನ್ಯಾಯಾಧೀಶ: ಕೋರ್ಟ್ ಆವರಣದಲ್ಲಿಯೇ ಉದ್ಧಟತನದ ವರ್ತನೆ

ಗಣರಾಜ್ಯೋತ್ಸವ ವೇಳೆ ವಿದ್ಯುತ್ ಸ್ಪರ್ಶಿಸಿ ಓರ್ವ ವಿದ್ಯಾರ್ಥಿ ಸಾವು

ನಾವು ಹಿಂದಿ ವಿರೋಧಿಸುವುದಿಲ್ಲ, ಹಿಂದಿ ಹೇರಿಕೆಗೆ ವಿರೋಧ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್

 

ಇತ್ತೀಚಿನ ಸುದ್ದಿ