ಎರಡು ತಲೆಯ ಎರಡು ಜೀವಂತ ಹಾವು, ವನ್ಯಮೃಗ ಕೊಂಬುಗಳ ಮಾರಾಟಗಾರರ ಬಂಧನ

ಬೆಂಗಳೂರು: ಬೆಂಗಳೂರಿನ ವೈಯಾಲಿಕಾವಲ್ ಪೊಲೀಸರು ಕಾರ್ಯಾಚರಣೆ ನಡೆಸಿ ಎರಡು ತಲೆಯ ಹಾವುಗಳನ್ನು, ವನ್ಯಮೃಗಗಳ ಕೊಂಬುಗಳನ್ನು ಹಾಗೂ ಆನೆಯ ದಂತವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಗಳನ್ನು ವಶಪಡಿಸಿಕೊಂಡಿದ್ದಾರೆ.
ವೈಯಾಲಿಕಾವಲ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಎರಡು ತಲೆಯ ಎರಡು ಜೀವಂತ ಹಾವುಗಳನ್ನು ಮಾರಾಟ ಮಾರಾಟ ಮಾಡಲು ಯತ್ನಿಸುತ್ತಿದ್ದ ಹಾಗೂ ಜಿಂಕೆ ಕೊಂಬು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ವ್ಯಕ್ತಿಗಳು ಮತ್ತು ಆನೆ ದಂತವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ವ್ಯಕ್ತಿಗಳ ಬಗ್ಗೆ ಬಂದ ಮಾಹಿತಿ ಮೇರೆಗೆ ಪ್ರತ್ಯೇಕವಾಗಿ ದಾಳಿ ಮಾಡಿ, ವ್ಯಕ್ತಿಗಳನ್ನು ವಶಕ್ಕೆ ಪಡೆದು, ಅವರಿಂದ ಸುಮಾರು 10 ಲಕ್ಷ ರೂ ಬೆಲೆ ಬಾಳುವ ಎರಡು ತಲೆಯ ಎರಡು ಹಾವುಗಳನ್ನು, ಸುಮಾರು 12 ಲಕ್ಷ ರೂ ಬೆಲೆಬಾಳುವ 12 ಜಿಂಕೆ ಕೊಂಬುಗಳನ್ನು ಹಾಗೂ ಸುಮಾರು 5 ಲಕ್ಷ ರೂ ಬೆಲೆಬಾಳುವ ಆನೆಯ ದಂತವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತಶೇಖರ್ ತೆಕ್ಕಣನವರ್ ಐ.ಪಿ.ಎಸ್ ರವರ ಮಾರ್ಗದರ್ಶನದಲ್ಲಿ ಮತ್ತು ಶೇಷಾದಿಪುರಂ, ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಪ್ರಕಾಶ್.ಆರ್. ರವರ ನೇತೃತ್ವದಲ್ಲಿ ವೈಯಾಲಿಕಾವಲ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಫೆಕ್ಟರ್ ಶಂಕರಗೌಡ ಬಸನಗೌಡರ, ಪಿ.ಎಸ್.ಐ. ವಿನಾಯಕ ಪನೂರ, ವಿಜಯಕುಮಾರ್ ಬಿರದಾರ್ ಹಾಗೂ ಸಿಬ್ಬಂದಿ ಯಶಸ್ವಿಯಾಗಿರುತ್ತಾರೆ.