ಮಣಿಪುರದಲ್ಲಿ ಬೆಂಕಿ: ಕೇಂದ್ರ ಸಚಿವ ಆರ್.ಕೆ.ರಂಜನ್ ಸಿಂಗ್ ನಿವಾಸದ ಮೇಲೆ ದಾಳಿ: 2 ತಿಂಗಳಲ್ಲಿ 2ನೇ ಬಾರಿ ಅಟ್ಯಾಕ್ - Mahanayaka
3:08 AM Friday 20 - September 2024

ಮಣಿಪುರದಲ್ಲಿ ಬೆಂಕಿ: ಕೇಂದ್ರ ಸಚಿವ ಆರ್.ಕೆ.ರಂಜನ್ ಸಿಂಗ್ ನಿವಾಸದ ಮೇಲೆ ದಾಳಿ: 2 ತಿಂಗಳಲ್ಲಿ 2ನೇ ಬಾರಿ ಅಟ್ಯಾಕ್

manipur
24/07/2023

ಜನಾಂಗೀಯ ಕಲಹ ಪೀಡಿತ ರಾಜ್ಯದ ಪರಿಸ್ಥಿತಿಯ ಬಗ್ಗೆ ಸಂಸತ್ತಿನಲ್ಲಿ ಮಾತನಾಡುವಂತೆ ಒತ್ತಾಯಿಸಿ ಕೇಂದ್ರ ಸಚಿವ ಆರ್.ಕೆ.ರಂಜನ್ ಸಿಂಗ್ ಅವರ ನಿವಾಸದ ಹೊರಗೆ ನಡೆದ ಮಹಿಳಾ ರ್ಯಾಲಿಯ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ.

ಇದು ಎರಡು ತಿಂಗಳಲ್ಲಿ ಎರಡನೇ ಬಾರಿಗೆ ವಿದೇಶಾಂಗ ವ್ಯವಹಾರಗಳ ಸಚಿವರ ಮನೆಯ ಮೇಲೆ ದಾಳಿ ನಡೆದ ಘಟನೆಯಾಗಿದೆ. ಮಣಿಪುರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸಹ ರಾಜ್ಯದಲ್ಲಿ ಶಾಂತಿಯನ್ನು ಪುನಃಸ್ಥಾಪಿಸುವಂತೆ ಒತ್ತಾಯಿಸಿ ಹಗಲಿನಲ್ಲಿ ರ್ಯಾಲಿ ನಡೆಸಿದರು. ರ್ಯಾಲಿ ನಡೆಸಲು ಅನುಮತಿ ನೀಡಿದ ಪ್ರದೇಶವನ್ನು ಯುವಕರು ದಾಟುತ್ತಿದ್ದಂತೆ ಅವರನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಿದರು.

ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಮೇ 4 ರಂದು ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಪುರುಷರ ಗುಂಪೊಂದು ಕಿರುಕುಳ ನೀಡುತ್ತಿರುವ ವೀಡಿಯೊ ಜುಲೈ 19 ರಂದು ಹೊರಬಂದ ಕೆಲವು ದಿನಗಳ ನಂತರ ಇಂತಹ ಘಟನೆಗಳು ನಡೆಯತೊಡಗಿದೆ.


Provided by

ದಾಳಿಯ ಸಮಯದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ. ಅಲ್ಲದೇ ಮನೆಗೆ ಹೆಚ್ಚಿನ ಹಾನಿಯಾಗಿಲ್ಲ. ಇಂಫಾಲ್ ಪಟ್ಟಣದ ಕೊಂಗ್ಬಾ ಪ್ರದೇಶದ ಮನೆಯಲ್ಲಿ ನಿಯೋಜಿಸಲಾದ ಭದ್ರತಾ ಸಿಬ್ಬಂದಿ ಪ್ರತಿಭಟನಾಕಾರರನ್ನು ಚದುರಿಸಿದರು. ಇದೇ ವೇಳೆ ಪ್ರತಿಭಟನಾಕಾರರು ಇಂಟರ್ನೆಟ್ ಸೇವೆಗಳನ್ನು ಪುನಃಸ್ಥಾಪಿಸುವಂತೆ ಒತ್ತಾಯಿಸಿದರು.

‘ರಾಜ್ಯದ ಪರಿಸ್ಥಿತಿಯ ಬಗ್ಗೆ ಸಚಿವರು ಸಂಸತ್ತಿನಲ್ಲಿ ಮಾತನಾಡಬೇಕೆಂದು ನಾವು ಒತ್ತಾಯಿಸುತ್ತೇವೆ. ನಾವು ಇಂಟರ್ ನೆಟ್ ಸೇವೆಗಳನ್ನು ಮರಳಿ ಬಯಸುತ್ತೇವೆ. ನಮಗೆ ಏನಾಗುತ್ತಿದೆ ಎಂದು ನಾವು ಜನರಿಗೆ ಹೇಳಲು ಬಯಸುತ್ತೇವೆ’ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ