ಪತ್ರಕರ್ತನ ಹತ್ಯೆ ಕೇಸ್: ಶಂಕಿತರ ಫೋಟೋ ಬಿಡುಗಡೆ; 25,000 ಬಹುಮಾನ ಘೋಷಿಸಿದ ಪೊಲೀಸರು

23/03/2025

ಸೀತಾಪುರದ ಲಕ್ನೋ-ದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಳೀಯ ಪತ್ರಕರ್ತ ಮತ್ತು ಆರ್ಟಿಐ ಕಾರ್ಯಕರ್ತನನ್ನು ಗುಂಡಿಕ್ಕಿ ಕೊಂದ ಶಂಕಿತರ ಚಿತ್ರವನ್ನು ಉತ್ತರ ಪ್ರದೇಶ ಪೊಲೀಸರು ಶನಿವಾರ ಬಿಡುಗಡೆ ಮಾಡಿದ್ದಾರೆ.

ಉತ್ತರ ಪ್ರದೇಶದ ಹಿಂದಿ ದಿನಪತ್ರಿಕೆಯೊಂದರ ಸ್ಥಳೀಯ ವರದಿಗಾರ ರಾಘವೇಂದ್ರ ಬಾಜಪೇಯಿ (35) ಹತ್ಯೆಗೀಡಾದ ವ್ಯಕ್ತಿ.

ಬೈಕ್ ಸವಾರಿ ಮಾಡುತ್ತಿರುವ ಇಬ್ಬರು ಶಂಕಿತರ ಚಿತ್ರಗಳ ಜೊತೆಗೆ, ಯುಪಿ ಪೊಲೀಸರು ಅವರ ಮಾಹಿತಿ ನೀಡಿದವರಿಗೆ ತಲಾ 25,000 ರೂ.ಗಳ ಬಹುಮಾನವನ್ನು ಘೋಷಿಸಿದ್ದಾರೆ. ಪೊಲೀಸರ ಪ್ರಕಾರ, ಹತ್ತಿರದ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಿದ ನಂತರ ಇಬ್ಬರೂ ಅನುಮಾನಾಸ್ಪದವಾಗಿ ಕಾಣಿಸಿಕೊಂಡಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version