ಊಟ ಇಲ್ಲ ಎಂದಿದ್ದಕ್ಕೆ ಹೊಟೇಲ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
![koppala](https://www.mahanayaka.in/wp-content/uploads/2022/05/koppala.jpg)
ಕೊಪ್ಪಳ: ಹೊಟೇಲ್ ಸಿಬ್ಬಂದಿ ಊಟ ಇಲ್ಲ ಎಂದಿದ್ದಕ್ಕೆ ಸಿಟ್ಟಿಗೆದ್ದ ಅಪರಿಚಿತರು ಹೊಟೇಲ್ ಗೆ ಬೆಂಕಿ ಹಚ್ಚಿ ಪರಾರಿಯಾದ ಘಟನೆ ಘಟನೆ ತಾಲೂಕಿನ ಆನೆಗೊಂದಿಯಲ್ಲಿ ನಡೆದಿದೆ.
ರಾತ್ರಿ ಹನ್ನೊಂದುವರೆ ಗಂಟೆಯ ಬಳಿಕ ಊಟ ಇಲ್ಲ ಎಂದು ಹೇಳಿದ್ದಕ್ಕೆ ಕೋಪಗೊಂಡ ಯುವಕರು ಅಡುಗೆ ಸಿಬ್ಬಂದಿಗೆ ಗೊತ್ತಾಗದಂತೆ ಕೋಣೆಯ ಹೊರಗಿನಿಂದ ಚಿಲಕ ಹಾಕಿ ಕೂಡಿಹಾಕಿದ್ದು, ಹೋಟೆಲ್ ನೊಳಗಿದ್ದ ನೀರಿನ ಸಂಪರ್ಕ ಕಡಿತಗೊಳಿಸಿ ಬೆಂಕಿ ಹಚ್ಚಿದ್ದಾರೆ.
ಅಡುಗೆ ಕೋಣೆಯಲ್ಲಿ ಬಂಧಿಗಳಾಗಿದ್ದ ಸಿಬ್ಬಂದಿ ಫೋನ್ ಮೂಲಕ ಗ್ರಾಮಸ್ಥರನ್ನು ಸ್ಥಳಕ್ಕೆ ಕರೆಸಿಕೊಂಡು ಬಂಧನದಿಂದ ಹೊರಬಂದಿದ್ದಾರೆ. ಬೆಂಕಿ ನಂದಿಸುವ ಹೊತ್ತಿಗಾಗಲೇ ಹೊಟೇಲ್ ನ ಸಂಪೂರ್ಣ ಭಾಗ ಸುಟ್ಟು ಕರಕಲಾಗಿದೆ. ಯಾವುದೇ ಸಾವು-ನೋವು ಸಂಭವಿಸಿಲ್ಲ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮಗನ ತಪ್ಪಿನಿಂದ 3.30 ಲಕ್ಷ ರೂಪಾಯಿ ದಂಡ ಪಾವತಿಸಿದ ತಂದೆ!
ಎಲ್ಲ ಮಸೀದಿ ಅಗೆಯೋಣ, ಶಿವಲಿಂಗ ಸಿಕ್ಕರೆ ನಮ್ಮದು, ಹೆಣ ಸಿಕ್ಕರೆ ನಿಮ್ಮದು: ಬಿಜೆಪಿ ಮುಖಂಡನ ಹೇಳಿಕೆ!
ಆರೆಸ್ಸೆಸ್, ಬಿಜೆಪಿ ಮೊದಲು ಕೈ ಹಾಕುವುದು ಶಿಕ್ಷಣ, ಇತಿಹಾಸದ ಕುತ್ತಿಗೆಗೆ: ದೇವನೂರು ಮಹದೇವ
ಮಹಿಳೆಯನ್ನು ಇರಿದು ಕೊಂದ ಕುರಿಗೆ ಮೂರು ವರ್ಷಗಳ ಜೈಲು ಶಿಕ್ಷೆ!
ಆಸ್ಪತ್ರೆಯಲ್ಲಿ ಭೀಕರ ಬೆಂಕಿ ಅವಘಡ: 11 ನವಜಾತ ಶಿಶುಗಳು ಸಜೀವ ದಹನ