ವಿಪರೀತ ವೇಗದಿಂದ ಬಂದು ಕಾಂಪೌಂಡ್ ಗೆ ಡಿಕ್ಕಿ ಹೊಡೆದ ಕಾರು: 7 ಮಂದಿ ಬಲಿ - Mahanayaka
6:33 AM Friday 20 - September 2024

ವಿಪರೀತ ವೇಗದಿಂದ ಬಂದು ಕಾಂಪೌಂಡ್ ಗೆ ಡಿಕ್ಕಿ ಹೊಡೆದ ಕಾರು: 7 ಮಂದಿ ಬಲಿ

koramangala
31/08/2021

ಬೆಂಗಳೂರು: ಬೆಂಗಳೂರಿನ ಕೋರಮಂಗಲ ಕಲ್ಯಾಣ ಮಂಟಪದ ಬಳಿ ಭೀಕರ ಅಪಘಾತ ನಡೆದಿದ್ದು, ಪರಿಣಾಮವಾಗಿ ಇಬ್ಬರು ಯುವತಿ ಸೇರಿದಂತೆ 7 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ನಡೆಸಿದ್ದು, ಘಟನೆಯ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದ್ದು, ಬೆಚ್ಚಿಬೀಳಿಸಿದೆ.

ವಿಡಿಯೋದಲ್ಲಿ ಕಂಡು ಬಂದಂತೆ ವಿಪರೀತ ವೇಗದಿಂದ ಬಂದಿದ್ದ ಕಾರು ಕಟ್ಟಡವೊಂದರ ಕಂಪೌಂಡ್ ಗೆ ಬಡಿದು, ಬಳಿಕ ವಿದ್ಯುತ್ ಕಂಬಕ್ಕೆ ಬಡಿದಿದೆ. ಈ ವೇಳೆ ಸ್ಥಳದಲ್ಲಿಯೇ 6 ಮಂದಿ ಸಾವನ್ನಪ್ಪಿದ್ದಾರೆ. ಓರ್ವನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಆತ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.

ಘಟನೆ ನಡೆದ ಸ್ಥಳದಿಂದ  ಸ್ವಲ್ಪ ದೂರದಲ್ಲಿಯೇ ಕ್ಯಾಬ್ ಚಾಲಕ ಸತೀಶ್ ಎಂಬವರು  ಕಾರು ನಿಲ್ಲಿಸಿ ಕಾರಿನಲ್ಲೇ ಕುಳಿತಿದ್ದರು. ಈ ವೇಳೆ ಕೇಳಿಸಿದ ಭೀಕರ ಶಬ್ಧ ಕೇಳಿ ಅವರು ಕಾರಿನ ಬಳಿಗೆ ಬಂದಿದ್ದು, ಈ ವೇಳೆ 6 ಮಂದಿ ಸಾವನ್ನಪ್ಪಿದ್ದರು. ಓರ್ವ ಮಾತ್ರ ಸ್ವಲ್ಪ ಕೆಮ್ಮುತ್ತಿದ್ದ ಎನ್ನಲಾಗಿದೆ. ಹೀಗಾಗಿ ರಸ್ತೆಯಲ್ಲಿ ಹೋಗುವ ವಾಹನಗಳನ್ನು ತಡೆದು ಅವರ ಸಹಾಯ ಪಡೆದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಸತೀಶ್ ಮುಂದಾಗಿದ್ದಾರೆ. ಈ ವೇಳೆ ಕೆಲವರು ಕಂಟ್ರೋಲ್ ರೂಮ್ ಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಆಡುಗೋಡಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Provided by

ಇನ್ನಷ್ಟು ಸುದ್ದಿಗಳು…

ಅಫ್ಘಾನಿಸ್ತಾನ ತೊರೆದ ಅಮೆರಿಕ ಸೇನೆ: ಆಗಸಕ್ಕೆ ಗುಂಡು ಹಾರಿಸಿ ಸಂಭ್ರಮಿಸಿದ ತಾಲಿಬಾನಿಗರು

ಏಳೆಂಟು ವರ್ಷದ ಪ್ರೀತಿ ನಡು ರಸ್ತೆಯಲ್ಲಿ ದುರಂತ ಅಂತ್ಯ! | ಪ್ರಿಯತಮೆಯ ಕತ್ತು ಸೀಳಿ, ತನ್ನ ಕತ್ತನ್ನೂ ಸೀಳಿಕೊಂಡ!

ಮಗುವಿಗೆ ಚಪ್ಪಲಿಯಲ್ಲಿ ಹೊಡೆದು ಚಿತ್ರ ಹಿಂಸೆ ನೀಡಿದ್ದ ತಾಯಿ ಅರೆಸ್ಟ್!

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರಿಕೆ | ಆರ್.ಅಶೋಕ್

ನಡು ರಸ್ತೆಯಲ್ಲಿ ಯುವತಿಯ ಕತ್ತು ಕೊಯ್ದು, ತಾನೂ ಕತ್ತು ಸೀಳಿಕೊಂಡ ಯುವಕ

ಆಕ್ಸಿಜನ್ ದುರಂತದ ಸಂದರ್ಭದಲ್ಲಿ ನಾನು ಹುಚ್ಚನಂತೆ ಅಳ್ತಾ ಇದ್ದೆ: ರಮೇಶ್ ಕುಮಾರ್

“ನೀವು ರೈತರ ತಲೆ ಒಡೆದು ಹಾಕುವುದನ್ನು ನಾನು ನೋಡಬೇಕು” | ಪೊಲೀಸರಿಗೆ ಆದೇಶ ನೀಡಿದ ಅಧಿಕಾರಿ

ಅತ್ಯಾಚಾರ ಪ್ರಕರಣ ಭೇದಿಸಿದ ಪೊಲೀಸರಿಗೆ 1 ಲಕ್ಷ ರೂ. ಬಹುಮಾನ ಘೋಷಿಸಿದ ಹಿರಿಯ ನಟ ಜಗ್ಗೇಶ್

ಇತ್ತೀಚಿನ ಸುದ್ದಿ