ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು:  ನೂರಾರು ಎಕರೆ ಅರಣ್ಯ ಬೆಂಕಿಗೆ ಆಹುತಿ

bamboo forest
21/01/2025

ಕೊಟ್ಟಿಗೆಹಾರ: ಚಾರ್ಮಾಡಿ ಘಾಟ್ ವ್ಯಾಪ್ತಿಯ ಬಾಳೂರು ಮೀಸಲು ಅರಣ್ಯದಲ್ಲಿ ಸೋಮವಾರ ರಾತ್ರಿ ಕಾಡಗಿಚ್ಚು ಉಂಟಾಗಿದ್ದು, ನೂರಾರು ಎಕರೆ ಅರಣ್ಯ ಬೆಂಕಿಗೆ ಆಹುತಿಯಾಗಿದೆ

ಬಾಳೂರು ಮೀಸಲು ಅರಣ್ಯಕ್ಕೆ ಹೊಂದಿಕೊಂಡಿರುವ ಬಿದಿರುತಳಗ್ರಾಮದ ಅರಣ್ಯದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು ನೂರಾರು ಎಕರೆ ಅರಣ್ಯ ನಾಶವಾಗಿರುವ ಬಗ್ಗೆ ವರದಿಯಾಗಿದೆ.

ಯಾರೋ ಕಿಡಿಗೇಡಿಗಳು ಅರಣ್ಯಕ್ಕೆ ಬೆಂಕಿ ಇಟ್ಟಿದ್ದು, ಕಾಡು ಪ್ರಾಣಿಗಳು ಹಾಗೂ ಸೂಕ್ಷ್ಮ ಪ್ರಭೇದದ ನೂರಾರು ಜಾತಿಯ ಪ್ರಾಣಿ ಪಕ್ಷಿಗಳ ಜೀವಕ್ಕೆ ಸಂಚಕರವಾಗಿದೆ

ಬಿದಿರುತಳ ಗ್ರಾಮಕ್ಕೆ ರಸ್ತೆ ವ್ಯವಸ್ಥೆ ಇಲ್ಲದೆ ಕಾಡ್ಗಿಚ್ಚು ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ಹೋಗುವುದು ಸವಾಲಿನ ಸಂಗತಿಯಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/Ci8F6ckDmAbCBQyqgLqOPx

ಇತ್ತೀಚಿನ ಸುದ್ದಿ

Exit mobile version