ಸರ್ಕಾರಿ ಬಸ್ ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ: ಮಾನವೀಯತೆ ಮೆರೆದ ಬಸ್ ನ ಸಿಬ್ಬಂದಿ - Mahanayaka

ಸರ್ಕಾರಿ ಬಸ್ ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ: ಮಾನವೀಯತೆ ಮೆರೆದ ಬಸ್ ನ ಸಿಬ್ಬಂದಿ

ksrtc
16/05/2023

ಬಸ್ಸಿನಲ್ಲಿ‌ ಪ್ರಯಾಣಿಸುತ್ತಿದ್ದ  ಗರ್ಭಿಣಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡು ಮಾರ್ಗಮಧ್ಯದಲ್ಲಿಯೇ ಬಸ್ಸಿನ ಮಹಿಳಾ‌ ನಿರ್ವಾಹಕಿಯು ಸದರಿ ಮಹಿಳೆಗೆ ಹೆರಿಗೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದು, ಇದೀಗ ತಾಯಿ ಮಗು ಆರೋಗ್ಯವಾಗಿದ್ದಾರೆ.


Provided by

ದಿನ ಚಿಕ್ಕಮಗಳೂರು ವಿಭಾಗದ ಚಿಕ್ಕಮಗಳೂರು ಘಟಕದ ವಾಹನ ಸಂಖ್ಯೆ ಕೆ.ಎ–18,ಎಫ್–0865ರಲ್ಲಿ ಬೆಂಗಳೂರು– ಚಿಕ್ಕಮಗಳೂರು ಮಾರ್ಗ ಕಾರ್ಯಾಚರಣೆಯ ವೇಳೆ ಉದಯಪುರ ಸಮೀಪವಿರುವ ಕೃಷಿ ಕಾಲೇಜು ಹತ್ತಿರ,  ಸಮಯ ಸುಮಾರು 13:25 ರ ವೇಳೆ ನಿಗಮದ ವಾಹನದಲ್ಲಿ  ಒಟ್ಟು 45 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.

ಈ ಪೈಕಿ ಬೆಂಗಳೂರಿನಿಂದ ಬೇಲೂರಿಗೆ ಪ್ರಯಾಣಿಸುತ್ತಿದ್ದ ಓರ್ವ ಗರ್ಭಿಣಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಹತ್ತಿರ ಯಾವುದೇ ಆಸ್ಪತ್ರೆ ಇರುವುದಿಲ್ಲ ಹಾಗೂ ಅವರಿಗೆ ಸಹಾಯದ ಅಗತ್ಯವಿರುತ್ತದೆ ಎಂದು ಮನಗಂಡು ತಕ್ಷಣ  ಬಸ್ಸಿನಲ್ಲಿದ್ದ ಮಹಿಳಾ ನಿರ್ವಾಹಕರು ವಾಹನವನ್ನು ನಿಲ್ಲಿಸಿ, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ ಪ್ರಯಾಣಿಕರನ್ನು  ಕೆಳಗೆ ಇಳಿಸಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ನಿರ್ವಾಹಕಿಯಾದ  ಎಸ್.ವಸಂತಮ್ಮ, ಚಾಲಕ-ಕಂ-ನಿರ್ವಾಹಕಿ ಬಿಲ್ಲೆ ಸಂಖ್ಯೆ 245 ಇವರು ಬಸ್ಸಿನಲ್ಲಿಯೇ ಹೆರಿಗೆಯನ್ನು ಮಾಡಿಸಿದ್ದಾರೆ.


Provided by

ಈ ಮಹಿಳೆಯು ಆರ್ಥಿಕವಾಗಿ ದುರ್ಬಲಳಾಗಿದ್ದ ಕಾರಣ ನಿಗಮದ ಚಾಲನಾ ಸಿಬ್ಬಂದಿಗಳು  ಮಹಿಳೆಯ ತುರ್ತು ಖರ್ಚಿಗಾಗಿ ಎಲ್ಲಾ ಪ್ರಯಾಣಿಕರಿಂದ ಒಟ್ಟು ರೂ.1500 ಗಳನ್ನು ಸಂಗ್ರಹಿಸಿ ಮಹಿಳೆಗೆ ನೀಡಿರುತ್ತಾರೆ. ನಂತರ ಮಹಿಳೆಯನ್ನು ಆಂಬುಲೆನ್ಸ್ ಮೂಲಕ ಶಾಂತಿಗ್ರಾಮ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆಯನ್ನು ದೊರಕಿಸಿದ್ದಾರೆ. ಈಗ ಮಹಿಳೆ ಮತ್ತು ಮಗು ಆರೋಗ್ಯವಾಗಿದ್ದಾರೆ.

ಸಕಾಲದಲ್ಲಿ ಸದರಿ ಮಹಿಳಾ ಪ್ರಯಾಣಿಕರಿಗೆ ಸ್ಪಂದಿಸಿ ಮಗು‌ ಮತ್ತು ತಾಯಿಯನ್ನು‌ ಉಳಿಸಿ ಮಾನವೀಯ ನೆರವನ್ನು ನೀಡಿದ ನಿರ್ವಾಹಕಿಯವರ ಕಾರ್ಯವು ನಿಜಕ್ಕೂ ಶ್ಲಾಘನೀಯವಾಗಿದೆ ಎಂದು ವ್ಯವಸ್ಥಾಪಕ ನಿರ್ದೇಶಕರಾದ ಜಿ.ಸತ್ಯವತಿ ಭಾಆಸೇ ರವರು ತಿಳಿಸಿರುತ್ತಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ