ಯಡಿಯೂರಪ್ಪ ಮತ್ತು ನನ್ನ ನಡುವೆ ವೈಯಕ್ತಿಕ ಮೈತ್ರಿಯಾಗಿದೆ | ಹೆಚ್.ಡಿ.ಕುಮಾರಸ್ವಾಮಿ

kumaraswamy
05/12/2021

ಮೈಸೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಭಾರೀ ಚರ್ಚೆಗಳಾಗುತ್ತಿವೆ. ಈ ನಡುವೆ ನಾಳೆ ಅಂತಿಮ ತೀರ್ಮಾನವನ್ನು ಕೈಗೊಳ್ಳುವುದಾಗಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಯಡಿಯೂರಪ್ಪ ಹಾಗೂ ನನ್ನ ನಡುವೆ ವೈಯಕ್ತಿಕ ಮೈತ್ರಿಯಾಗಿದೆ. ಈವರೆಗೆ ಯಡಿಯೂರಪ್ಪ ಮಾತ್ರವೇ ನನಗೆ ಕರೆ ಮಾಡಿ ಬೆಂಬಲ ಕೇಳಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದು, ಸಿಎಂ ಬೊಮ್ಮಾಯಿ ಅವರು ಅದು ಅವರ ವೈಯಕ್ತಿಕ ಹೇಳಿಕೆ ಎಂದಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

ಇನ್ನೂ ಕಾಂಗ್ರೆಸ್ ನವರು, ಬಹಿರಂಗವಾಗಿ ನಮಗೆ ಯಾರ ಬೆಂಬಲವೂ ಬೇಡ ಎಂದು ಹೇಳಿದ್ದಾರೆ. ಬೇಡ ಎಂದವರಿಗೆ ನಾವಾಗಿ ಹೋಗಿ ಬೆಂಬಲ ಕೊಡಲು ಸಾಧ್ಯವಿಲ್ಲ. ಈ ಎಲ್ಲ ಅಂಶಗಳನ್ನು ಮುಂದಿಟ್ಟುಕೊಂಡು ನಾಳೆ ಬೆಂಬಲದ ತೀರ್ಮಾನ ಮಾಡಿ, ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ತಿಳಿಸುತ್ತೇನೆ ಎಂದು ಅವರು ತಿಳಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬೊಮ್ಮಾಯಿಯನ್ನು ಕಿತ್ತು ಹಾಕಲು ಈಶ್ವರಪ್ಪ ಓಡಾಡುತ್ತಿದ್ದಾರೆ | ಸಿದ್ದರಾಮಯ್ಯ

ತಮಿಳು ಗೊತ್ತಿದ್ದವರಿಗೆ ಮಾತ್ರ ಸರ್ಕಾರಿ ನೌಕರಿ | ತಮಿಳುನಾಡು ಸರ್ಕಾರದಿಂದ ಮಹತ್ವದ ನಿರ್ಧಾರ

ಹಿರಿಯ ನಟ ಶಿವರಾಮ್ ಪಂಚಭೂತಗಳಲ್ಲಿ ಲೀನ: ಬನಶಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ

ನಂಬರ್ ಪ್ಲೇಟ್ ನಲ್ಲಿ SEX ಪದ ಬಳಕೆ: ಸಾರಿಗೆ ಇಲಾಖೆಗೆ ಮಹಿಳಾ ಆಯೋಗ ನೋಟಿಸ್

“ನಿನ್ನನ್ನು ನೋಡೋಕೆ ಬಂದಿದ್ದೀನಿ…” | ಪುಟಾಣಿ ಅಭಿಮಾನಿ ಜೊತೆಗೆ ಸಿದ್ದರಾಮಯ್ಯ ಮಾತು

ಭೀಕರ ಜ್ವಾಲಾಮುಖಿ ಸ್ಫೋಟ: 13 ಮಂದಿ ಸಾವು, ಗ್ರಾಮ ಬಿಟ್ಟು ಓಡಿದ ಜನ

ಇತ್ತೀಚಿನ ಸುದ್ದಿ

Exit mobile version